158
ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಜ.12ರಂದು ನಡೆದ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದಡಿ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಭಾಷಣ ಪ್ರಸಾರ ಮಾಡಿದ ಯೂಟ್ಯೂಬ್ ಚಾನೆಲ್ ವಿರುದ್ಧ ಪುತ್ತೂರು ನಗರ ಠಾಣೆಗೆ ದೂರು ಸಲ್ಲಿಕೆಯಾಗಿದೆ. ಸಮಾಜದಲ್ಲಿ ದ್ವೇಷ ಬಿತ್ತುವ ಮೂಲಕ ಶಾಂತಿ ಕದಡಿದ್ದಾರೆ ಎಂದು ಕರ್ನಾಟಕ ಮಾನವ ಬಂಧುತ್ವ ವೇದಿಕೆ ಆರೋಪಿಸಿದೆ. ಸಂಘಟನೆಯ ಪುತ್ತೂರು ತಾಲೂಕು ಸಮಿತಿಯು ಈ ಸಂಬಂಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಆಗ್ರಹಿಸಿ ಮನವಿ ಪತ್ರ ನೀಡಿದೆ.