Home ಬ್ರೇಕಿಂಗ್ ನ್ಯೂಸ್ದೈಗೋಳಿ: ಇಂದು (ಫೆ. 01) ಜನಸೇವಾರ್ಥ ಆಂಬೂಲೆನ್ಸ್ ಲೋಕಾರ್ಪಣೆ

ದೈಗೋಳಿ: ಇಂದು (ಫೆ. 01) ಜನಸೇವಾರ್ಥ ಆಂಬೂಲೆನ್ಸ್ ಲೋಕಾರ್ಪಣೆ

by Editor
ದೈಗೋಳಿ: ಶಿವತಾಂಡವ ಪುತ್ತಿಲ ಪರಿವಾರ, ಹಿಂದೂ ಬಾಂಧವರು ದೈಗೋಳಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ಸಾರ್ವಜನಿಕರ ತುರ್ತು ಚಿಕಿತ್ಸಾ ಸೌಕರ್ಯಕ್ಕಾಗಿ ಖರೀದಿಸಲಾದ ನೂತನ  ಆಂಬೂಲೆನ್ಸ್ ಲೋಕಾರ್ಪಣಾ ಕಾರ್ಯಕ್ರಮವು ಇಂದು, ಫೆಬ್ರವರಿ 1ರ ಆದಿತ್ಯವಾರ ಸಂಜೆ ದೈಗೋಳಿಯ ಶ್ರೀ ರಾಮಕೃಷ್ಣ ಭಜನಾ ಮಂದಿರದಲ್ಲಿ ನಡೆಯಲಿದೆ.
ಸಂಜೆ 4.30ಕ್ಕೆ ಕು| ಸಹನಾ ಶೆಟ್ಟಿ ನೇತೃತ್ವದ ಶ್ರೀ ಜ್ಯೋತಿರ್ಮಯಿ ನಾಟ್ಯಾಲಯ ಹಾಗೂ ಬಾಲಗೋಕುಲದ ಮಕ್ಕಳಿಂದ ‘ನೃತ್ಯ ವೈಭವ’ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಚಾಲನೆ ದೊರೆಯಲಿದೆ. ಸಂಜೆ 5.30ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ವೇದಮೂರ್ತಿ ಶ್ರೀ ಬೋಳಂತಕೋಡಿ ರಾಮ ಭಟ್ ಅವರು ಉದ್ಘಾಟಿಸಲಿದ್ದಾರೆ. ಗ್ರಾಮ ಪವಿತ್ರ ಪಾಣಿ ಶ್ರೀ ಕುಶಲಕುಮಾರ ಪಾತೂರಾಯ ಬೀಡು ಅವರು ಸಭಾಧ್ಯಕ್ಷತೆ ವಹಿಸಲಿದ್ದಾರೆ.

ಹಿಂದೂ ಮುಖಂಡ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಚಾಲಕ ಶ್ರೀ ಅರುಣ್ ಕುಮಾರ್ ಪುತ್ತಿಲ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸಿ ಧಾರ್ಮಿಕ ಭಾಷಣ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಡಾ. ಉದಯಕುಮಾರ್ ನೂಜಿ ಮತ್ತು ಡಾ. ಶಾರದಾ ಉದಯಕುಮಾರ್ ದಂಪತಿಗಳನ್ನು ಸನ್ಮಾನಿಸಲಾಗುವುದು.
ಕಾರ್ಯಕ್ರಮದಲ್ಲಿ ಶ್ರೀ ದೇವಿಪ್ರಸಾದ್ ಪೊಯ್ಯತ್ತಾಯ, ಶ್ರೀ ರಾಜ ಬೆಳ್ಳಪ್ಪಾಡ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ. ಊರ ಪರವೂರ ದಾನಿಗಳ ಸಹಕಾರದೊಂದಿಗೆ ಸಿದ್ಧವಾಗಿರುವ ಈ ಆಂಬುಲೆನ್ಸ್ ಸೇವೆಯು ದೈಗೋಳಿ ಸುತ್ತಮುತ್ತಲಿನ ಗ್ರಾಮೀಣ ಭಾಗದ ಜನರಿಗೆ ವರದಾನವಾಗಲಿದೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

Leave a Comment