153
ಸವಣೂರು ಮುಗೇರು ದೇವಸ್ಥಾನ ಜಾತ್ರೋತ್ಸವ ಪೂರ್ವಭಾವಿ ಸಭೆ
ಕಡಬ ತಾಲೂಕು ಸವಣೂರು ಗ್ರಾಮದ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಇದರ ವರ್ಷಂಪ್ರತಿ ನಡೆಯುವ ಜಾತ್ರೋತ್ಸವದ ಬಗ್ಗೆ ಪೂರ್ವಭಾವಿ ಸಭೆ ದೇವಸ್ಥಾನದ ವಠಾರದಲ್ಲಿ ಜರಗಿತು.
ಮಾರ್ಚ್ ತಿಂಗಳ 25 ಹಾಗೂ 26 ನೇ ತಾರೀಕಿನಂದು ವಾಡಿಕೆಯಂತೆ ನಡೆಯುವ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವದ ಸಿದ್ಧತೆಯ ಬಗ್ಗೆ ಚರ್ಚಿಸಲಾಯಿತು .
ಫೆ 27, ಶುಕ್ರವಾರ ಸಂಜೆ 5:00 ಗಂಟೆಗೆ ದೇವಸ್ಥಾನದಲ್ಲಿ ಆಮಂತ್ರಣ ಪತ್ರಿಕೆ ಅನಾವರಣ ಮಾಡುವ ಬಗ್ಗೆ ತಿರ್ಮಾನಿಸಲಾಯಿತು.
ಬಳಿಕ ಮುಗೇರು ಶ್ರೀ ಮಹಾವಿಷ್ಣು ಮಂಡಳಿ ವತಿಯಿಂದ ಮನೆ ಮನೆ ಭಜನೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆಗೆ ಚಾಲನೆ ನೀಡುವ ಬಗ್ಗೆ ತೀರ್ಮಾನಿಸಲಾಯಿತು .
ಜಾತ್ರೋತ್ಸವ ಸಮಿತಿಯ ಸದಸ್ಯರು ಹಾಗೂ ಭಕ್ತಾದಿಗಳು ಅರ್ಚಕರು ಸಭೆಯಲ್ಲಿ ಉಪಸ್ಥಿತರಿದ್ದರು.