ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರ ಕೋರಿಯಾನ ಚಾರ್ವಾಕ ಗರಡಿ ಕ್ಷೇತ್ರದ ಜೀರ್ಣೋದ್ಧಾರಕ್ಕಾಗಿ ಧರ್ಮಸ್ಥಳ ಕ್ಷೇತ್ರದಿಂದ ಸಹಾಯಧನದ ಡಿಡಿ.ವಿತರಣೆ

ಕಡಬ ತಾಲೂಕು ಚಾರ್ವಾಕ ಗ್ರಾಮದ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ ಕೊರಿಯಾನ ಚಾರ್ವಾಕ ಇಲ್ಲಿಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ನೀಡಲಾದ ಎರಡು ಲಕ್ಷ ರೂಪಾಯಿ ದೇಣಿಗೆಯನ್ನು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಅವರು ಟ್ರಸ್ಟಿನ ಅಧ್ಯಕ್ಷರಿಗೆ ದೇಣಿಗೆಯ ಚೆಕ್ ನೀಡಿದರು. ಈ ಸಂದರ್ಭದಲ್ಲಿ ಗರಡಿಯ ಸೇವಾ ಟ್ರಸ್ಟಿನ ಅಧ್ಯಕ್ಷರಾದ ಸತ್ಯನಾರಾಯಣ ಕಲ್ಲುರಾಯ, ಚಾರ್ವಾಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಜೀರ್ಣೋದ್ಧಾರ ಸಮಿತಿಯ ಸಂಚಾಲಕರಾದ
ಗಣೇಶ್ ಉದುನಡ್ಕ, ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಸವಣೂರು ವಲಯ ಮೇಲ್ವಿಚಾರಕರಾದ ವೀಣಾ ಕೆ, ಟ್ರಸ್ಟಿನ ಉಪಾಧ್ಯಕ್ಷರಾದ ವಸಂತ ದಲಾರಿ, ಟ್ರಸ್ಟಿನ ಕಾರ್ಯದರ್ಶಿಯಾದ ಬಾಲಕೃಷ್ಣ ರೈ ಕಾಸ್ಪಡಿ ಗುತ್ತು, ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಚಾರ್ವಾಕ ಸೇವಾ ಪ್ರತಿನಿಧಿ ತೀರ್ಥ ಲತಾ, ಸ್ವಯಂಸೇವಕ ಸಮಿತಿ ಅಧ್ಯಕ್ಷರಾದ ನಂದನ್ ಕಜೆ,ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಚಾರ್ವಾಕ ಒಕ್ಕೂಟದ ಮಾಜಿ ಅಧ್ಯಕ್ಷರಾದ ಕುಸುಮಾಧರ ಚಾರ್ವಾಕ ಉಪಸ್ಥಿತರಿದ್ದರು.