80
ರಾಮಕ್ಷತ್ರಿಯ ಯುವ ಸೇವಾ ಸಂಘದ ನೂತನ ಸದಸ್ಯರ ಪದಗ್ರಹಣ ಸಮಾರಂಭ ಇಂದು
ಬೆಂಗಳೂರು: ಶ್ರೀರಾಮಕ್ಷತ್ರಿಯ ಯುವ ಸೇವಾ ಸಂಘ ಬೆಂಗಳೂರು (ರಿ.) ವತಿಯಿಂದ ನೂತನ ಸದಸ್ಯರ ಪದಗ್ರಹಣ ಸಮಾರಂಭವು ಇಂದು (ಮಾರ್ಚ್ 01, 2026) ಸಂಜೆ 4.30 ಗಂಟೆಗೆ ನಡೆಯಲಿದೆ.
ವಿಜಯನಗರದ ಕದಂಬ ಸಾಮ್ರಾಟ್ ಸಭಾಂಗಣದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಸಂಘದ ನೂತನ ಸದಸ್ಯರು ಅಧಿಕೃತವಾಗಿ ಪದಗ್ರಹಣ ಸ್ವೀಕರಿಸಲಿದ್ದಾರೆ. ಸಮಾಜದ ಏಕತೆ, ಸೇವಾ ಚಟುವಟಿಕೆಗಳ ವಿಸ್ತರಣೆ ಹಾಗೂ ಯುವಕರ ಸಂಘಟನೆಗೆ ಬಲ ನೀಡುವ ಉದ್ದೇಶದಿಂದ ಈ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಸಮಾಜದ ಬಂಧುಗಳು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.