41
ಕೋರಿಯಾನ ಗರಡಿ ಕ್ಷೇತ್ರಕ್ಕೆ ಸುಳ್ಯ ಶಾಸಕರ ಅನುದಾನ 5ಲಕ್ಷ ಮಂಜೂರು, ಇಂಜಿನಿಯರ್ ಭೇಟಿ
ಮಾರ್ಚ್. 11 ಕಡಬ ತಾಲೂಕು ಚಾರ್ವಾಕ ಗ್ರಾಮದ ಬ್ರಹ್ಮ ಬೈದರ್ಕಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ ಕೋರಿಯಾನ ಚಾರ್ವಾಕ ಇಲ್ಲಿಗೆ ಮಾನ್ಯ ಶಾಸಕರಾದ ಕುಮಾರಿ ಭಾಗೀರಥಿ ಮುರುಳ್ಯ ಇವರ ಕ್ಷೇತ್ರ ಅಭಿವೃದ್ಧಿ ಅನುದಾನದಲ್ಲಿ ಕೋರಿಯಾನ ಗರಡಿ ಕ್ಷೇತ್ರಕ್ಕೆ 5 ಲಕ್ಷ ರೂಪಾಯಿ ಅನುದಾನವನ್ನು ಮಂಜೂರು ಮಾಡಿದ್ದು ಇದಕ್ಕೆ ಪೂರಕವಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಇಂಜಿನಿಯರ್ ಕ್ಷೇತ್ರಕ್ಕೆ ಭೇಟಿ ನೀಡಿದ್ದು ಈ ಸಂದರ್ಭದಲ್ಲಿ ಗರಡಿಯ ಸೇವಾ ಟ್ರಸ್ಟಿನ ಅಧ್ಯಕ್ಷರಾದ ಸತ್ಯನಾರಾಯಣ ಕಲ್ಲುರಾಯ, ಅನುದಾನ ಒದಗಿಸಲು ಸಹಕರಿಸಿದ ಚಾರ್ವಾಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಜೀರ್ಣೋದ್ಧಾರ ಸಮಿತಿಯ ಸಂಚಾಲಕರಾದ ಗಣೇಶ್ ಉದುನಡ್ಕ, ಟ್ರಸ್ಟಿನ ಉಪಾಧ್ಯಕ್ಷರಾದ ವಸಂತ ದಲಾರಿ, ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ವಿಶ್ವನಾಥ ದೇವಿ ನಗರ ಉಪಸ್ಥಿತರಿದ್ದರು.