67
ಶರವೂರಿನಲ್ಲಿ ಇಂದು ‘ಛತ್ರಪತಿ ಶಿವಾಜಿ’ ತುಳು ನಾಟಕ ಪ್ರದರ್ಶನ
ಅಲಂಕಾರು: ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶ ಮಹೋತ್ಸವದ ಅಂಗವಾಗಿ ಇಂದು (ರಾತ್ರಿ 8 ಗಂಟೆಗೆ) ಭವ್ಯ ವೇದಿಕೆಯಲ್ಲಿ ‘ಛತ್ರಪತಿ ಶಿವಾಜಿ’ ತುಳು ನಾಟಕ ಪ್ರದರ್ಶನ ನಡೆಯಲಿದೆ.
ಖ್ಯಾತ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಅವರ ನಿರ್ದೇಶನದಲ್ಲಿ ಮೂಡಿಬಂದ ಈ ನಾಟಕವು ಛತ್ರಪತಿ ಶಿವಾಜಿ ಮಹಾರಾಜರ ಶೌರ್ಯ, ಸಾಹಸ ಮತ್ತು ದೇಶಭಕ್ತಿಯನ್ನು ಒಳಗೊಂಡಿದ್ದು, ಪ್ರೇಕ್ಷಕರಿಗೆ ವಿಶೇಷ ರಂಗಾನುಭವ ನೀಡಲಿದೆ.
ಶರವೂರು ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಈ ನಾಟಕವನ್ನು ಆಯೋಜಿಸಲಾಗಿದ್ದು, ಭಕ್ತರು ಹಾಗೂ ನಾಟಕಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.