Home Uncategorizedರಜಾ ಹಿನ್ನೆಲೆ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ದಟ್ಟಣೆ ಹೆಚ್ಚಳ

ರಜಾ ಹಿನ್ನೆಲೆ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ದಟ್ಟಣೆ ಹೆಚ್ಚಳ

by anamika

ರಜಾ ಹಿನ್ನೆಲೆ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ದಟ್ಟಣೆ ಹೆಚ್ಚಳ

ಸುಬ್ರಹ್ಮಣ್ಯ,: ರಾಜ್ಯ ಸರ್ಕಾರ ಘೋಷಿಸಿದ್ದ ರಜಾ ಹಿನ್ನೆಲೆ, ದಲ್ಲಿ ಭಕ್ತರ ಸಂಚಾರವು ಗಣನೀಯವಾಗಿ ಹೆಚ್ಚಳ ಕಂಡಿದೆ.

ರಾಜ್ಯದ ವಿವಿಧ ಭಾಗಗಳು ಹಾಗೂ ಹೊರರಾಜ್ಯಗಳಿಂದ ಆಗಮಿಸಿದ ಭಕ್ತರು ಶೇಷ ಸೇವೆ, ಆಶ್ಲೇಷ ಬಲಿ, ನಾಗ ಪ್ರತಿಷ್ಠೆ, ಸರ್ಪ ಸಂಸ್ಕಾರ, ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಸೇವೆಗಳಲ್ಲಿ ಪಾಲ್ಗೊಂಡು ದೇವರ ಆಶೀರ್ವಾದ ಪಡೆದರು.

ಭಕ್ತರ ಹೆಚ್ಚಿನ ಆಗಮನವನ್ನು ಗಮನದಲ್ಲಿಟ್ಟುಕೊಂಡು ದೇವಸ್ಥಾನದ ಅಧಿಕಾರಿಗಳು, ಸಿಬ್ಬಂದಿ ವರ್ಗ, ಭದ್ರತಾ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಸುಗಮ ದರ್ಶನ, ಸೇವೆಗಳ ನಿರ್ವಹಣೆ ಹಾಗೂ ವಾಹನ ಪಾರ್ಕಿಂಗ್ ವ್ಯವಸ್ಥೆಗಳನ್ನು ಸಮರ್ಪಕವಾಗಿ ನಿರ್ವಹಿಸಲಾಯಿತು.

ಮಧ್ಯಾಹ್ನ ವೇಳೆಗೆ ದೇವಸ್ಥಾನದ ಹೊರಾಂಗಣದಲ್ಲಿ ವಿವಿಧ ಸೇವೆಗಳಲ್ಲಿ ಭಾಗವಹಿಸಲು ಭಕ್ತರು ಹೆಚ್ಚಾಗಿ ಜಮಾಯಿಸಿದ್ದು, ನಾಗಪ್ರತಿಷ್ಠಾ ಮಂಟಪದ ಎದುರು ನಡೆದಾಡಲು ಸಹ ಸ್ಥಳವಿಲ್ಲದಷ್ಟು ಜನಸಂದಣಿ ಕಂಡುಬಂತು.

ಮುಂದಿನ ದಿನಗಳಲ್ಲಿ ರಜಾ ಅವಧಿ ಮುಂದುವರಿಯುವ ಹಿನ್ನೆಲೆ ಇನ್ನಷ್ಟು ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಮುಂಜಾಗ್ರತಾ ಕ್ರಮಗಳನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

You may also like

Leave a Comment