Home Uncategorizedಅಸಂಘಟಿತ ಕಾರ್ಮಿಕರಿಗೆ ಉಚಿತ ನೋಂದಣಿ: ಸಾಮಾಜಿಕ ಭದ್ರತಾ ಯೋಜನೆಗಳ ಸದುಪಯೋಗಕ್ಕೆ ಸರ್ಕಾರದ ಕರೆ

ಅಸಂಘಟಿತ ಕಾರ್ಮಿಕರಿಗೆ ಉಚಿತ ನೋಂದಣಿ: ಸಾಮಾಜಿಕ ಭದ್ರತಾ ಯೋಜನೆಗಳ ಸದುಪಯೋಗಕ್ಕೆ ಸರ್ಕಾರದ ಕರೆ

by anamika

ಅಸಂಘಟಿತ ಕಾರ್ಮಿಕರಿಗೆ ಉಚಿತ ನೋಂದಣಿ: ಸಾಮಾಜಿಕ ಭದ್ರತಾ ಯೋಜನೆಗಳ ಸದುಪಯೋಗಕ್ಕೆ ಸರ್ಕಾರದ ಕರೆ

ಬೆಂಗಳೂರು: ಅಸಂಘಟಿತ ಕ್ಷೇತ್ರದ ಕಾರ್ಮಿಕರ ಕಲ್ಯಾಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ ಕಾರ್ಮಿಕರಿಗೆ ಉಚಿತ ನೋಂದಣಿ ಅವಕಾಶ ಕಲ್ಪಿಸಿದೆ. ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಜಾರಿಗೊಳಿಸುತ್ತಿರುವ ‘ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ’ ಯೋಜನೆಯಡಿ 18 ರಿಂದ 60 ವರ್ಷದೊಳಗಿನ 101 ವರ್ಗಗಳ ಅಸಂಘಟಿತ ಕಾರ್ಮಿಕರು ನೋಂದಾಯಿಸಿಕೊಳ್ಳಬಹುದು.

ಇದರ ಜೊತೆಗೆ, ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿ ಯೋಜನೆಯಡಿ ಖಾಸಗಿ ವಾಣಿಜ್ಯ ವಾಹನ ಚಾಲಕರು, ನಿರ್ವಾಹಕರು, ಕ್ಲೀನರ್‌ಗಳು, ಗ್ಯಾರೇಜ್ ಕಾರ್ಮಿಕರು ಸೇರಿದಂತೆ ಮೋಟಾರು ಸಾರಿಗೆ ಕ್ಷೇತ್ರದ ಕಾರ್ಮಿಕರು ಕೂಡ ನೋಂದಣಿ ಮಾಡಿಸಿಕೊಳ್ಳಲು ಅವಕಾಶ ನೀಡಲಾಗಿದೆ.

ಆಸಕ್ತರು ಮಂಡಳಿಯ ಅಧಿಕೃತ ವೆಬ್‌ಸೈಟ್ www.ksuwssb.karnataka.gov.in ಮೂಲಕ ಅಥವಾ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳು (CSC), ತಾಲೂಕು ಮತ್ತು ಜಿಲ್ಲಾ ಕಾರ್ಮಿಕ ಇಲಾಖೆ ಕಚೇರಿಗಳಲ್ಲಿ ಆನ್‌ಲೈನ್ ಮೂಲಕ ನೋಂದಾಯಿಸಿಕೊಳ್ಳಬಹುದು. ಫಲಾನುಭವಿಗಳು ಉಚಿತವಾಗಿ ನೋಂದಣಿ ಮಾಡಿಕೊಂಡು ಸ್ಮಾರ್ಟ್ ಕಾರ್ಡ್ ಪಡೆಯಬಹುದು. ಆದರೆ ಮೋಟಾರು ಸಾರಿಗೆ ಕಾರ್ಮಿಕರಿಗೆ ಮೂರು ವರ್ಷಗಳ ಅವಧಿಗೆ ರೂ.50 ನೋಂದಣಿ ಶುಲ್ಕ ವಿಧಿಸಲಾಗುತ್ತದೆ.

ಯೋಜನೆಯ ಪ್ರಮುಖ ಸೌಲಭ್ಯಗಳು:
‘ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ’ ಯೋಜನೆಯಡಿ ಅಪಘಾತ ಮರಣಕ್ಕೆ ರೂ.1 ಲಕ್ಷದವರೆಗೆ ಪರಿಹಾರ, ಸಹಜ ಮರಣಕ್ಕೆ ರೂ.10,000 ಹಾಗೂ ಅಪಘಾತ ಸಂಬಂಧಿತ ಆಸ್ಪತ್ರೆ ವೆಚ್ಚಕ್ಕೆ ರೂ.50,000ವರೆಗೆ ನೆರವು ಲಭ್ಯವಿದೆ.

ಮೋಟಾರು ಸಾರಿಗೆ ಕಾರ್ಮಿಕರ ಯೋಜನೆಯಡಿ ಅಪಘಾತದಿಂದ ಮರಣ ಹೊಂದಿದಲ್ಲಿ ರೂ.5 ಲಕ್ಷ ಪರಿಹಾರ, ಅಂತ್ಯಸಂಸ್ಕಾರ ವೆಚ್ಚಕ್ಕೆ ರೂ.25,000, ಶಾಶ್ವತ ಅಂಗವೈಕಲ್ಯಕ್ಕೆ ರೂ.2 ಲಕ್ಷ ಹಾಗೂ ತಾತ್ಕಾಲಿಕ ದುರ್ಬಲತೆಗೆ ರೂ.1 ಲಕ್ಷವರೆಗೆ ವೈದ್ಯಕೀಯ ವೆಚ್ಚ ಮರುಪಾವತಿ ನೀಡಲಾಗುತ್ತದೆ. ಜೊತೆಗೆ, ಫಲಾನುಭವಿಗಳ ಮಕ್ಕಳಿಗೆ ಶಿಕ್ಷಣ ಸಹಾಯಧನ ಕೂಡ ನೀಡಲಾಗುತ್ತದೆ.

ಸರ್ಕಾರದ ಈ ಯೋಜನೆಗಳಿಂದ ಅಸಂಘಟಿತ ಕ್ಷೇತ್ರದ ಕಾರ್ಮಿಕರಿಗೆ ಆರ್ಥಿಕ ಭದ್ರತೆ ಒದಗಿಸುವುದು ಹಾಗೂ ಅವರ ಜೀವನಮಟ್ಟ ಸುಧಾರಿಸುವುದು ಉದ್ದೇಶವಾಗಿದೆ.

You may also like

Leave a Comment