39
ನಾಳೆ ಮಂಗಳೂರಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಂದ ಸಾರ್ವಜನಿಕ ಅಹವಾಲು ಸ್ವೀಕಾರ
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಮತ್ತು ಅಹವಾಲುಗಳನ್ನು ಸ್ವೀಕರಿಸಲು ನಾಳೆ (ಮೇ 19) ಲಭ್ಯವಿರಲಿದ್ದಾರೆ.
ಸಾರ್ವಜನಿಕರು ತಮ್ಮ ಕುಂದುಕೊರತೆಗಳು ಹಾಗೂ ಅಹವಾಲುಗಳನ್ನು ನೇರವಾಗಿ ಸಂಸದರ ಗಮನಕ್ಕೆ ತರಲು ಈ ಭೇಟಿಯ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

ಕಾರ್ಯಕ್ರಮದ ವಿವರಗಳು:
ದಿನಾಂಕ: 19-05-2026, ಮಂಗಳವಾರ
ಸಮಯ: ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 12:00 ಗಂಟೆಯವರೆಗೆ
ಸ್ಥಳ: ಸಂಸದರ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ (DC , ಪಡೀಲ್, ಮಂಗಳೂರು.
ಕ್ಷೇತ್ರದ ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ನಿಗದಿಪಡಿಸಿದ ಸಮಯದಲ್ಲಿ ಭೇಟಿ ನೀಡಿ, ತಮ್ಮ ಮನವಿಗಳನ್ನು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.