ಕೆಎಸ್ಆರ್ಟಿಸಿ ವಿದ್ಯಾರ್ಥಿ ಬಸ್ ಪಾಸ್ಗೆ ಅರ್ಜಿ ಆಹ್ವಾನ: ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ
ಬೆಂಗಳೂರು, ಜೂನ್ 4: 2026-27ನೇ ಶೈಕ್ಷಣಿಕ ವರ್ಷದ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಆರಂಭದ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ಸರ್ಕಾರದ ನಿರ್ದೇಶನದಂತೆ ಈ ವರ್ಷವೂ ವಿದ್ಯಾರ್ಥಿ ಬಸ್ ಪಾಸ್ಗಳನ್ನು ಸಂಪೂರ್ಣ ಗಣಕೀಕೃತ ವ್ಯವಸ್ಥೆಯ ಮೂಲಕ ವಿತರಿಸಲಾಗುತ್ತಿದ್ದು, ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ.
ವಿದ್ಯಾರ್ಥಿಗಳು ಮೂಲಕ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಲದೆ, ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಸರ್ಕಾರದ ನಿಯಮಾನುಸಾರ ರೂ.30 ಸೇವಾ ಶುಲ್ಕ ವಿಧಿಸಲಾಗುತ್ತದೆ.
ಅರ್ಜಿದಾರರು ಡಿಕ್ಲರೇಶನ್ ಫಾರ್ಮ್ ಅನ್ನು ಅಥವಾ ಸೇವಾಸಿಂಧು ಪೋರ್ಟಲ್ನಿಂದ ಡೌನ್ಲೋಡ್ ಮಾಡಿಕೊಂಡು, ಅದನ್ನು ಭರ್ತಿ ಮಾಡಿ ಶಾಲೆ/ಕಾಲೇಜಿನ ಮುಖ್ಯೋಪಾಧ್ಯಾಯರು ಅಥವಾ ಪ್ರಾಂಶುಪಾಲರ ಸಹಿ ಹಾಗೂ ಸಂಸ್ಥೆಯ ಮುದ್ರೆಯೊಂದಿಗೆ ಅಪ್ಲೋಡ್ ಮಾಡುವುದು ಕಡ್ಡಾಯವಾಗಿದೆ.
